Shivamogga News

ಸಾಲಬಾಧೆ ; ನದಿಗೆ ಹಾರಿ ಯುವ ರೈತ ಆತ್ಮಹತ್ಯೆ !

ತೀರ್ಥಹಳ್ಳಿ ; ಸಾಲಬಾಧೆಯಿಂದ ಮನನೊಂದು ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕೈಮರ ಸಮೀಪದ ಹಾಗಲಮನೆ ವಾಸಿ ಕೌಶಿಕ್ (30) ಆತ್ಮಹತ್ಯಗೆ ಶರಣಾದ ದುರ್ದೈವಿ. ಅವಿವಾಹಿತನಾಗಿದ್ದ ಕೌಶಿಕ್ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ. ಮಾಗರವಲ್ಲಿ ಸೊಸೈಟಿ, ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವು ಕಡೆ ಬಡ್ಡಿಗೆ ಸಾಲ ಪಡೆದಿದ್ದ ಈ ಯುವಕ ಸಾಲದ ಕಿರುಕುಳಕ್ಕೆ ಬೇಸತ್ತು ಹಾಗೂ ಈ ಬಾರಿ ಅಡಿಕೆಗೆ ಬಂದಿರುವ ಎಲೆಚುಕ್ಕಿ ರೋಗದಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>