ಲೈನ್ ದುರಸ್ತಿ ವೇಳೆ ಏಕಾಏಕಿ ಪ್ರವಹಿಸಿದ ವಿದ್ಯುತ್ ; ಯುವಕ ಸಾವು !

Written by Mahesh Hindlemane

Updated on:

ರಿಪ್ಪನ್‌ಪೇಟೆ ; ಲೈನ್ ದುರಸ್ತಿ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಿಳಕಿ ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಗಾಜಿನಗೋಡು ಗ್ರಾಮದ ಕೇಶವ್ (28) ಮೃತ ದುರ್ಧೈವಿ. ಬಿಳಕಿ ಗ್ರಾಮದಲ್ಲಿ ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಗುತ್ತಿಗೆದಾರ ದೇವರಾಜ್ ಎಂಬುವರೊಂದಿಗೆ ಈತ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment