ವಿದ್ಯುತ್ ತಂತಿಗೆ ಏಣಿ ತಗುಲಿ ಯುವಕ ಸಾವು !

Written by Mahesha Hindlemane

Published on:

ಎನ್.ಆರ್.ಪುರ ; ತೋಟದಲ್ಲಿ ಅಲ್ಯೂಮಿನಿಯಂ ಏಣಿ ತರುತ್ತಿದ್ದ ವೇಳೆ ವಿದ್ಯುತ್ ತಂತಿಗೆ ತಗುಲಿ ಯುವಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ತೊಪ್ಪುರು ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತೊಪ್ಪುರು ಗ್ರಾಮದ ಸಂಪತ್ (28) ಎಂಬಾತ ಮೃತ ದುರ್ದೈವಿ. ಮೂರು ವರ್ಷಗಳ ಹಿಂದಷ್ಟೆ ಮದುವೆಯಾಗಿದ್ದ ಸಂಪತ್ ಅವರಿಗೆ ಚಿಕ್ಕ ಮಗು ಕೂಡ ಇದೆ.

ಹೇಗಾಯ್ತು ಘಟನೆ ?

ತೋಟದ ಕೆಲಸದ ವೇಳೆ ಅಲ್ಯೂಮಿನಿಯಂ ಏಣಿಯನ್ನು ತೆಗೆದು ತರುತ್ತಿದ್ದ ಸಂಪತ್, ಆ ಏಣಿ ಅಚಾನಕ್ ವಿದ್ಯುತ್ ತಂತಿಗೆ ತಗುಲಿ ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Comment