ಎನ್.ಆರ್.ಪುರ ; ತೋಟದಲ್ಲಿ ಅಲ್ಯೂಮಿನಿಯಂ ಏಣಿ ತರುತ್ತಿದ್ದ ವೇಳೆ ವಿದ್ಯುತ್ ತಂತಿಗೆ ತಗುಲಿ ಯುವಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ತೊಪ್ಪುರು ಗ್ರಾಮದಲ್ಲಿ ನಡೆದಿದೆ.
ತೊಪ್ಪುರು ಗ್ರಾಮದ ಸಂಪತ್ (28) ಎಂಬಾತ ಮೃತ ದುರ್ದೈವಿ. ಮೂರು ವರ್ಷಗಳ ಹಿಂದಷ್ಟೆ ಮದುವೆಯಾಗಿದ್ದ ಸಂಪತ್ ಅವರಿಗೆ ಚಿಕ್ಕ ಮಗು ಕೂಡ ಇದೆ.
ಹೇಗಾಯ್ತು ಘಟನೆ ?
ತೋಟದ ಕೆಲಸದ ವೇಳೆ ಅಲ್ಯೂಮಿನಿಯಂ ಏಣಿಯನ್ನು ತೆಗೆದು ತರುತ್ತಿದ್ದ ಸಂಪತ್, ಆ ಏಣಿ ಅಚಾನಕ್ ವಿದ್ಯುತ್ ತಂತಿಗೆ ತಗುಲಿ ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.