ಅಜ್ಜಂಪುರ ; ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಾಳೆ ಹಸೆಮಣೆ ಏರಬೇಕಿದ್ದ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.
ಶೃತಿ (24) ಮೃತ ಮದುಮಗಳು. ಶೃತಿ ನಾಳೆ ಸಪ್ತಪದಿ ತುಳಿದು ಹೊಸ ಬಾಳಿಗೆ ಕಾಲಿಡಲಿದ್ದಳು. ಮದುವೆ ಖುಷಿಯಲ್ಲಿದ್ದ ಶೃತಿಗೆ ಲೋ ಬಿಪಿ ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಸ್ಥಳೀಯರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪ್ರಾಣ ಕಳೆದುಕೊಂಡಿದ್ದಾಳೆ.

ತರೀಕೆರೆ ಮೂಲದ ಯುವಕ ದಿಲೀಪ್ ಜೊತೆ ಮದುವೆ ನಿಶ್ಚಯವಾಗಿತ್ತು. ಸಂಭ್ರಮದಲ್ಲಿದ್ದ ಮದುವೆ ಮನೆ ಈಗ ಶೋಕ ಸಾಗರದಲ್ಲಿ ಮುಳುಗಿದೆ. ಮಗಳನ್ನು ಕಳೆದುಕೊಂಡ ಪೋಷಕರು ಕಂಗಾಲಾಗಿದ್ದಾರೆ. ಅಲ್ಲದೇ ಮದುವೆ ಮೂಲಕ ಹೊಸ ಬದುಕಿನ ಕನಸು ಕಂಡಿದ್ದ ವರ ಆಘಾತಕ್ಕೆ ಒಳಗಾಗಿದ್ದಾನೆ. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





